ಬ್ಯಾಂಕ್ ಆಫ್ ಬರೋಡಾ ಅಂತರ ಕಾಲೇಜ್ ಹಿಂದಿ ಸಂಗೋಷ್ಠಿ

ಬ್ಯಾಂಕ್ ಆಫ್ ಬರೋಡಾ, ವಲಯ ಕಛೇರಿ, ಮಂಗಳೂರು ಮತ್ತು ಬೆಸಂಟ್ ಮಹಿಳಾ ಕಾಲೇಜ್, ಕೊಡಿಯಾಲ್ ಬೈಲ್, ಮಂಗಳೂರು ವತಿಯಿಂದ ಜಂಟಿಯಾಗಿ ಅಂತರ ಕಾಲೇಜ್ ಹಿಂದಿ ಸಂಗೋಷ್ಠಿಯನ್ನು ಆಚರಿಸಲಾಗಿದ್ದು, ಮಂಗಳೂರಿನ ಸ್ಥಳೀಯ ಕಾಲೇಜ್, ಉಡುಪಿ ಮತ್ತು ಸುಳ್ಯ ಕಾಲೇಜ್ ಗಳಿಂದ ವಿದ್ಯಾರ್ಥಿ / ವಿದ್ಯಾರ್ಥಿನಿಯರು, ವಿದ್ಯಾರ್ಥಿ ಸಂಗೋಷ್ಠಿ ಮತ್ತು ಪೇಪರ್ ಪ್ರಸ್ತುತಿ ಸ್ಪರ್ಧೆಯಲ್ಲಿ ಶಿಕ್ಷಣ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾತೃಭಾಷೆಯ ಮಹತ್ವದ ಬಗ್ಗೆ ವಿಮರ್ಶಿಸಿ ಸಂಶೋಧನಾ ಲೇಖನಗಳನ್ನು ಪ್ರಸ್ತುತ ಪಡಿಸಿದರು.

ಈ ಕಾರ್ಯಕ್ರಮವು ಡಾ. ಪ್ರವೀಣ ಕುಮಾರ್ ಕೆ ಸಿ, ಪ್ರಾಂಶುಪಾಲರು, ಬೆಸೆಂಟ್ ಮಹಿಳಾ ಕಾಲೇಜ್ ರವರ ಅಧ್ಯಕ್ಷತೆಯಲ್ಲಿ ಆರಂಭಗೊಂಡಿತು. ಹಾಗೂ ಸಂಗೋಷ್ಠಿಯ ಮುಖ್ಯ ಅತಿಥಿಯಾಗಿ ಶ್ರೀ ಅಶ್ವಿನಿ ಕುಮಾರ್, ಉಪ ಮಹಾಪ್ರಬಂಧಕ – ನೆಟ್ ವರ್ಕ್, ಬ್ಯಾಂಕ್ ಆಫ್ ಬರೋಡಾ, ವಲಯ ಕಛೇರಿ, ಮಂಗಳೂರು ಉಪಸ್ಥಿತರಿದ್ದರು. ಬೆಸೆಂಟ್ ಮಹಿಳಾ ಕಾಲೇಜ್ ನ ಆಡಳಿತ ಅಧಿಕಾರಿಯಾದ ಪ್ರೋ. ರಾಜಶೇಖರ ಹೆಬ್ಬಾರ್, ಕಾರ್ಯಕ್ರಮದ ಉಪಾಧ್ಯಕ್ಷರಾದ ಡಾ. ಮಂಜುಳ ಕೆ ಟಿ ಉಪಸ್ಥಿತರಿದ್ದರು.

ಕಾಲೇಜ್ ನ ಹಿಂದೀ ವಿಭಾಗಧ್ಯಕ್ಷರಾದ ಡಾ. ಪರಶುರಾಮ್ ಮಾಲಗೆ ಮತ್ತು ಬ್ಯಾಂಕ್ ಆಫ್ ಬರೋಡಾದ ರಾಜಭಾಷಾ ಅಧಿಕಾರಿಯಾದ ಶ್ರೀಮತಿ ಪುಷ್ಪಲತಾ ರವರು ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಯೋಜಿಸಿದರು.

Support Kittall

Kittall has been a free portal in konkani, publishing non-stop since 2011.
Kittall publishes poetry, fiction and prose from veteran and youth writers.
Kittall also posts news and news analysis in Konkani, Kannada and English.
Alternative media needs readers support.
Kittall counts on your support in its endeavour of preserving  konkani literature for the generations to come. 

 

Leave a Comment

© All Right Reserved. Kittall Publications. 

-
00:00
00:00
Update Required Flash plugin
-
00:00
00:00